ತಲೆ ತಗ್ಗಿಸುವ ಕೆಲಸ ಮಾಡಿಲ್ಲ, ಮಾಡೋದು ಇಲ್ಲ; ತಾಯಿ ಕಾಣಿಕೆ ಬಗ್ಗೆ ತಲೆ ಕೆಡಿಸಿಕೊಂಡವರಿಗೆ ಧನ್ಯವಾದಗಳು ಎಂದ ಜಗ್ಗೇಶ್..

ಆಯುಧ ಪೂಜೆ ದಿನ ಶುರುವಾದ ಹುಲಿ ಉಗುರು ಪೆಂಡೆಂಟ್ ನ್ನ ವಿಚಾರ ಇದೀಗ ರಾಜ್ಯಾದ್ಯಂತ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಹೌದು ಹುಲಿ ಉಗುರಿನ ಲಾಕೆಟ್​ ಧರಿಸಿದ್ದ ರೈತ ಹಾಗೂ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನವಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ. ಇದಾದ ಬಳಿಕ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ವಿಚಾರದಲ್ಲಿ ನಟ ಜಗ್ಗೇಶ್‌ಗೂ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ಕೂಡಾ ದಾಖಲಾಗಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್(Jaggesh) ಅವರು ಹುಲಿ ಉಗುರು ಲಾಕೆಟ್​​​​ ಧರಿಸಿರುವ ವಿಡಿಯೋ ವೈರಲ್​ ಆಗುತ್ತಿದೆ. ಈ ಸಂಬಂಧ ನಟ ಜಗ್ಗೇಶ್​ ವಿರುದ್ಧ ಕಾಂಗ್ರೆಸ್​ನ ಮಾಜಿ ಎಂಎಲ್​ಸಿ ಪಿ.ಆರ್ ರಮೇಶ್, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ದೂರು ನೀಡಿದ್ದಾರೆ.

WhatsApp Group Join Now
Telegram Group Join Now

ಈ ಹಿಂದೆ ತಮ್ಮ ಬಳಿ ಹುಲಿ ಉಗುರು ಇರುವ ಬಗ್ಗೆ ಜಗ್ಗೇಶ್(Jaggesh) ಬಹಿರಂಗವಾಗಿಯೇ ಹೇಳಿಕೆ‌ ನೀಡಿದ್ದರು. ಹುಲಿ ಉಗುರು ಧರಿಸುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ನನಗೆ 20 ವರ್ಷ ಆದಾಗ ನನ್ನಮ್ಮ ನನ್ನ ಮಗ ಹುಲಿ ಇದ್ದಂಗೆ ಇರಬೇಕು ಅಂತ ಹೇಳಿ ಒರಿಜಿನಲ್ ಹುಲಿ ಉಗುರಿನಲ್ಲಿ ಈ ಲಾಕೆಟ್ ಇರುವ ಸರ ಮಾಡಿಸಿ ಹಾಕಿದ್ದರು ಎಂದಿದ್ದರು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ವೈರಲ್ ಆಗ್ತಿದ್ದಂತೆ ನ್ಯಾಯಾಲಯ ಎಲ್ಲರಿಗೂ ಒಂದೇ ರೀತಿ ಇರಬೇಕು ಅಂತ ಮಾತುಗಳು ಶುರುವಾದ್ವು, ಇದೀಗ ಈ ಕುರಿತು ನಟ ಜಗ್ಗೇಶ್ ಸ್ಪಷ್ಟನೆ  ಕೊಟ್ಟಿದ್ದಾರೆ.

ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp

ಇದನ್ನೂ ಓದಿ: ಊಟದಲ್ಲಿ ವಿಷ ಹಾಕಿ ಅಂದಿದ್ರಂತೆ ಪ್ರತಾಪ್ ಸಂಬಂಧಿಕರು; ಅಪ್ಪ, ಅಮ್ಮ ಮತ್ತು ತಂಗಿಯನ್ನ ನೆನೆದು ಕಣ್ಣೀರಿಟ್ಟ ಪ್ರತಾಪ್

ಸಂಬಂಧಪಟ್ಟವರಿಗೆ ಪೆಂಡೆಂಟ್ ಒಪ್ಪಿಸಿದ್ದೀನಿ

ಹೌದು ನಿಮ್ಮೆಲ್ಲರಿಗೂ ಗೊತ್ತಿರುವಂತೆ ಹುಲಿ ಉಗುರು ಧರಿಸಿದ್ದಕ್ಕೆ ಬಿಗ್​ ಬಾಸ್​ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನದ ಬೆನ್ನಲ್ಲೇ ಹಲವರು ಹುಲಿ ಉಗುರಿನ ಲಾಕೆಟ್​ ಧರಿಸಿಕೊಂಡಿದ್ದು, ಇದೀಗ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಅದರಂತೆ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಹುಲಿ ಉಗುರಿನ ಲಾಕೆಟ್ ಧರಿಸಿದ್ದ ನಟ ಜಗ್ಗೇಶ್(Jaggesh) ಬಹಳ ಧೈರ್ಯವಾಗಿಯೇ ಇದು ನಿಜವಾದ ಹುಲಿಯ ಉಗುರಿನಿಂದ ಮಾಡಿಸಿದ್ದು ನನ್ನ ಅಮ್ಮಾ ನನ್ನ ಹುಟ್ಟುಹಬ್ಬಕ್ಕೆ ಕೊಟ್ಟಿದ್ದು, ಹುಲಿ ರೀತಿ ನನ್ ಮಗ ಇರಬೇಕು ಅಂತ ಅಮ್ಮಾ ಪ್ರೀತಿಯಿಂದ ಮಾಡಿಸಿಕೊಟ್ಟಿದ್ದು ಅಂತ ಹೇಳಿಕೊಂಡಿದ್ರು.

ಸದ್ಯ ಅದೇ ವಿಡಿಯೋ ಇದೀಗ ನಟ ಜಗ್ಗೇಶ್ ಅವ್ರಿಗೆ ಮುಳ್ಳಾಗಿ ಪರಿಣಮಿಸಿದ್ದು, ಸೆಲೆಬ್ರೇಟಿ ಗಳಿಗೆ ಒಂದು ನ್ಯಾಯಾಲಯ ಸಾಮಾನ್ಯರಿಗೆ ಒಂದು ನ್ಯಾಯಾನಾ ಅಂತ ಎಲ್ಲರು ಪ್ರಶ್ನೆ ಮಾಡ್ತಿದ್ದಾರೆ, ಅಲ್ದೇ ದೂರನ್ನ ಕೂಡ ಕೊಟ್ಟಿದ್ದಾರೆ. ತಪ್ಪು ಯಾರೇ ಮಾಡಿದ್ರು ಅವ್ರಿಗೆ ಶಿಕ್ಷೆ ಆಗಲೇಬೇಕು ಅಂತ ಕೆಲವರು ಪಟ್ಟು ಹಿಡಿದ್ದಿದ್ದಾರೆ. ಅಲ್ದೇ ಸಾಕಷ್ಟು ಜನ ವಿಡಿಯೋ ಶೇರ್ ಮಾಡಿ ಟ್ರೋಲ್ ಕೂಡ ಮಾಡ್ತಿದ್ದಾರೆ. ಇದೆಲ್ಲವನ್ನ ಗಮನಿಸಿರೋ ನಟ ಜಗ್ಗೇಶ್ ಅರಣ್ಯ ಅಧಿಕಾರಿಗಳು ಪರಿಶೀಲನೆ ಅಂತ ಮನೆಗೆ ಬಂದಾಗ ಅವ್ರ ಜೊತೆ ಸೌಮ್ಯವಾಗಿಯೇ ವರ್ತಿಸಿದ್ದು, ಲಾಕೆಟ್ ಅನ್ನ ಸ್ವತಃ ಅವ್ರೆ ಅಧಿಕಾರಿಗಳಿಗೆ ನೀಡಿದ್ದಾರೆ. ಈ ಕುರಿತಂತೆ ನಟ ಜಗ್ಗೇಶ್ ಮಾತನಾಡಿದ್ದು, ಏನ್ ಹೇಳಿದ್ದಾರೆ ಗೊತ್ತಾ?

ಹೌದು ಈ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯಧಿಕಾರಿಗಳು ನಮ್ಮ ಮನೆಗೆ ಬಂದಿದ್ರು, ಅವ್ರ ಪರಿಶೀಲನೆಗೆ ನಾನು ಅಡ್ಡಿ ಪಡಿಸಿಲ್ಲ ಅವ್ರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ ಆ ಲಾಕೆಟ್ ಅನ್ನ ಅಧಿಕಾರಿಗಳಿಗೆ ನೀಡಿದ್ದೇನೆ ಎಂದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್(X) ನಲ್ಲಿ ಬರೆದುಕೊಂಡಿರುವ ನಟ ಜಗ್ಗೇಶ್, ಅಧಿಕಾರಿಗಳು ಕೇಳಿದ ವಸ್ತುವನ್ನ ಒಪ್ಪಿಸಿದ್ದೇನೆ. ಕಾನೂನಿನ ಮುಂದೆ ಯಾರು ದೊಡ್ಡವರಲ್ಲ, ಕಾನೂನು ದೊಡ್ಡಡು, ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ, ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು, ಸಮಾಜ ಘಾತಕರಿಗಿಂತ ನನ್ನ ತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲಾ ಮಾಡೋದಿಲ್ಲಾ! ಪಾಚ್ಕೊಳಿ ಅಂತ ನಟ ಜಗೇಶ್ ಬರೆದುಕೊಂಡಿದ್ದಾರೆ.

ಅಲ್ದೇ ಮತ್ತೊಂದು ಟ್ವೀಟ್ ನಲ್ಲಿ ಒಂದು ವಿಷಯ ಅದ್ಭುತವಾಗಿ ಅರಿತೆ ಪ್ರೀತಿಸುವವರು 1000 ಜನ ಇದ್ದರು ವಿಷಯವಿಲ್ಲದೆ ದ್ವೇಷ ಮಾಡುವ 100ಜನರು ಇದ್ದೆ ಇರುತ್ತಾರೆ. ಆದ್ರೆ ಒಂದು ವಿಷಯ ನೆನಪಿನಲ್ಲಿಡಬೇಕು, ಒಳ್ಳೆ ಗುಣ, ನಡತೆ ಇದ್ದಾಗ ಕೊಲ್ಲೋಕೆ ಸಾವಿರಮಂದಿ ಬಂದರು ಕಾಯಲು ಒಬ್ಬ ಬರುತ್ತಾನೆ ಅವನೆ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆದು ಮಾಡಿ ಅನ್ಯರಿಗೆ ಕೆಡುಕು ಬಯಸಿ ಬಾಳಿದರೆ ನಾಶ ಅಂತ ಬರೆದುಕೊಂಡಿದ್ದಾರೆ.

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram