ನಟ ನಾಗಭೂಷಣ್ ಕಾರ್ ಆಕ್ಸಿಡೆಂಟ್ ಪ್ರಕರಣ! ಸಿಸಿಟಿವಿ ಯಲ್ಲಿ ಸೆರೆಯಾಯಿತು ಆಕ್ಸಿಡೆಂಟ್ ದೃಶ್ಯ

ಇತ್ತೀಚಿನ ದಿನಗಳಲ್ಲಿ ಕಲಾವಿದರ ಹಿಟ್ ಅಂಡ್ ರನ್ ಪ್ರಕರಣಗಳು ಹೆಚ್ಚುತ್ತಲೇ ಇದೆ. ಹೌದು ಮೊನ್ನೆಯಷ್ಟೇ ಕಿರುತೆರೆ ಕಲಾವಿದನ ಹಿಟ್ ಅಂಡ್ ರನ್ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು ಅಲ್ದೇ ಕೊನೆಗೆ ಆ ಪ್ರಕರಣದಲ್ಲಿ ತನ್ನದೇ ತಪ್ಪಿತ್ತು ಅಂತ ಹಾಸ್ಯ ಕಲಾವಿದ ಚಂದ್ರಪ್ರಭಾ ಸ್ಪಷ್ಟನೆ ನೀಡಿದ್ರು ಸದ್ಯ ಆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಇಂತದ್ದೇ ಪ್ರಕರಣ ಬೆಳಕಿಗೆ ಬಂದಿದ್ದು ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವಿಗಿದ್ದಾಗಿದ್ದು ಮತ್ತೊರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕ ಅಂತ ಹೇಳಲಾಗ್ತಿದೆ. ಹೌದು ಕನ್ನಡದ ನಟ ನಾಗಭೂಷಣ ಅವರ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು, ಮತೋರ್ವ ವ್ಯಕ್ತಿಯ ಸ್ಥಿತಿ ಚಿಂತಾಜಾನಕವಾಗಿದೆ. ಘಟನೆ ಬಳಿಕ ಓಡಿ ಹೋಗಲು ಯತ್ನಿಸಿದ ನಟನನ್ನ ಸ್ಥಳೀಯರೇ ಪೊಲೀಸರಿಗೆ ಒಪ್ಪಿಸಿದ್ದು ಸದ್ಯ ನಟ ನಾಗಭೂಷಣ ಅವರನ್ನು ಬಂಧಿಸಲಾಗಿದೆ.

WhatsApp Group Join Now
Telegram Group Join Now

ಹೌದು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಟ ನಾಗಭೂಷಣ ಕಾರು ಅಪಘಾತವಾಗಿದ್ದು, ಪಾದಚಾರಿ ಮಹಿಳೆ 48ವರ್ಷದ ಎಸ್.ಪ್ರೇಮಾ ಅವರು ಮೃತಪಟ್ಟಿದ್ದಾರೆ. ಉತ್ತರಹಳ್ಳಿಯ ವಸಂತಪುರ ಮುಖ್ಯರಸ್ತೆ ನಿವಾಸಿ ಪ್ರೇಮಾ ಅವರು ಪತಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ನಾಗಭೂಷಣ ಅವರ ಕಾರು ಅತೀ ವೇಗದಲ್ಲಿ ಬಂದು ದಂಪತಿಗೆ ಢಿಕ್ಕಿ ಹೊಡೆದು ಬಳಿಕ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರವಾಗಿದ್ದ ಪ್ರೇಮಾ ಅವರು ಮೃತಪಟ್ಟಿದ್ದಾರೆ. ಕೃಷ್ಣ ಅವರಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ನಾಗಭೂಷಣ ಕಾರು ಚಲಾಯಿಸಿದ್ದರು. ಇದರಿಂದಲೇ ಅಪಘಾತ ಆಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಅಲ್ದೇ ಅಪಘಾತದ ಬಳಿಕ‌ ಕಾರು ಸ್ಥಳದಲ್ಲೇ ಬಿಟ್ಟು ನಾಗಭೂಷಣ ಅವರು ಪರಾರಿಯಾಗಲು ಯತ್ನಿಸಿದ್ದರು. ಅವರನ್ನು ತಡೆದು‌ ನಿಲ್ಲಿಸಿದ್ದೆವು. ಜನರು ಹೆಚ್ಚು ಸೇರುತ್ತಿದ್ದಂತೆ ಮಾಸ್ಕ್ ಹಾಕಿಕೊಂಡಿದ್ದಾರೆ. ಬಳಿಕ ಹೊಯ್ಸಳ ವಾಹನ ಸ್ಥಳಕ್ಕೆ ಬಂದಿದ್ದು ಅದರಲ್ಲಿ ಅವರನ್ನು ಕೂರಿಸಿ‌ ಠಾಣೆಗೆ ಕಳುಹಿಸಿದೆವು ಎಂದು ಸ್ಥಳೀಯರೋರ್ವರು ಹೇಳಿದ್ದಾರೆ. ಇನ್ನು ಘಟನೆ ಬಗ್ಗೆ ಮೃತ ಪ್ರೇಮಾ ಅವರ ಸಂಬಂಧಿಕರು ದೂರು ನೀಡಿದ್ದು, ಅದರಂತೆ ನಾಗಭೂಷಣ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದೀಗ ಕಾರು ಜಪ್ತಿ ಮಾಡಿ, ನಾಗಭೂಷಣ ಅವರನ್ನು ಬಂಧಿಸಲಾಗಿತ್ತು, ಬಳಿಕ ಜಾಮೀನು ಮೇಲೆ ಅವ್ರನ್ನ ಬಿಡುಗಡೆ ಮಾಡಿದ್ದಾರೆ. ಸದ್ಯ ನಟ, ಕಾರ್ ಆಕ್ಸಿಡೆಂಟ್ ಮಾಡಿರುವ ಬಗ್ಗೆ ಸಿಸಿಟಿವಿ ದೃಶ್ಯ ಲಭ್ಯವಾಗಿದ್ದು ಅಪಘಾತದಲ್ಲಿ ನಟನದ್ದೇ ತಪ್ಪು ಅಂತ ಹೇಳಲಾಗ್ತಿದೆ.

ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp

ಸ್ಥಳದಲ್ಲಿದ್ದ ಸ್ಥಳೀಯರು ಅಪಘಾತದ ಬಗ್ಗೆ ಹೇಳಿದ್ದೇನು ಗೊತ್ತಾ?

ಕೋಣನಕುಂಟೆ ಕ್ರಾಸ್ ಬಳಿ ಫುಟ್ ಪಾತ್ ಮೇಲೆ ವಾಕಿಂಗ್ ಮಾಡುತ್ತಿದ್ದ ದಂಪತಿಗೆ ನಾಗಭೂಷಣ್​ ಅವರ ಕಾರು ಡಿಕ್ಕಿಯಾಗಿ ಪ್ರೇಮ ಎನ್ನುವ ಮಹಿಳೆ ಸಾವನ್ನಪ್ಪಿದ್ದರು. ಆಕೆಯ ಪತಿ ಕೃಷ್ಣ ಬಿ ಎನ್ನುವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಈ ಸಂಬಂಧ ನಟನ ವಿರುದ್ಧ ಕೆ.ಎಸ್‌.ಲೇಔಟ್ ಸಂಚಾರ ಪೊಲೀಸ್‌ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿತ್ತು. ದೂರು ಹಿನ್ನೆಲೆಯಲ್ಲಿ ನಟನನ್ನು ಬಂಧಿಸಿ, ಬಳಿಕ ಜಾಮೀನು ಮೇಲೆ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಸದ್ಯ ಸಿಸಿಟಿವಿ ದೃಶ್ಯದಲ್ಲಿ ದಂಪತಿಯಾದ ಪ್ರೇಮ ಮತ್ತು ಆಕೆಯ ಪತಿ ಕೃಷ್ಣ ಬಿ ಅವರು ಅಪಾರ್ಟ್​ಮೆಂಟ್​ನಿಂದ ಮೊದಲು ಹೋಗುತ್ತಿರುತ್ತಾರೆ. ಬಳಿಕ ನಟ ನಾಗಭೂಷಣ್ ಅವರ ಕಾರು ರಸ್ತೆಯಲ್ಲಿ ವೇಗವಾಗಿ ಹೋಗುತ್ತಿರುವ ದೃಶ್ಯ ಕಂಡುಬರುತ್ತದೆ.

ಅದಾದ ಕೆಲವೇ ಸೆಕೆಂಡ್ ನಲ್ಲಿ ಅವ್ರಿಗೆ ಕಾರು ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಆಗ ನಟ ಸ್ಥಳದಿಂದ ಕಾರನ್ನ ಬಿಟ್ಟು ಎಸ್ಕೇಪ್ ಆಗಲು ಪ್ರಯತ್ನಿಸಿದ್ದು ಸ್ಥಳದಲ್ಲಿದ್ದ ಸ್ಥಳೀಯರು ನಟನನ್ನ ಹಿಡಿದು ಹೊಯ್ಸಳ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ನಟ ಬೇಲ್ ಮೇಲೆ ಆಚೆ ಬಂದಿದ್ದು ಪೋಲಿಸರು ವಿಚಾರಣೆಗೆ ಕರೆದಾಗ ಬರುವಂತೆ ಸೂಚನೆಯನ್ನ ನೀಡಿದ್ದಾರೆ. ಇನ್ನು ಮೃತ ಪ್ರೇಮಾ ಅವ್ರ ಮಗಳ ಮದುವೆ ನಿಶ್ಚಯವಾಗಿದ್ದು ಕೆಲ ತಿಂಗಳುಗಲ್ಲೆ ಮದುವೆ ಇತ್ತು ಅಷ್ಟರಲ್ಲಿ ಹೀಗಾಗಿದೆ ಅಂತ ಮೃತ ಪ್ರೇಮಾ ಅವ್ರ ಮಗ ಹಾಗೂ ಮಗಳು ಕಣ್ಣೀರಿಡುತ್ತಿದ್ದೂ, ಆರೋಪಿಗೆ ಸರಿಯಾದ ಶಿಕ್ಷೆ ಆಗಬೇಕು ಅಂತ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಯ ಸಮಸ್ಯೆ ಕಗ್ಗಂಟಾಗಿ ಹೋಯ್ತಾ? ಯಾವಾಗ ಬರುತ್ತೆ ಹಣ ಅನ್ನೋರಿಗೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಇದನ್ನೂ ಓದಿ: ನೋವಿನಿಂದ ಹೊರಬಂದ ವರ್ಷ ಕಾವೇರಿ; ಅಭಿಮಾನಿಗಳು ಕೇಳಿದ ಪ್ರಶ್ನೆ ವರ್ಷ ಕಾವೇರಿ ಕೊಟ್ಟ ಉತ್ತರವೇನು?

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram