ನನ್ನ ಗಂಡನನ್ನ ವಿಲನ್ ಮಾಡ್ತಿದ್ದಾರೆ! ವಿನಯ್ ಒಳ್ಳೆತನ ಹೈಲೆಟ್ ಆಗ್ತಾಯಿಲ್ಲ; ವಾಹಿನಿಯವರ ಮೇಲೆ ನೇರವಾಗಿ ಆರೋಪ ಮಾಡಿದ್ರ ವಿನಯ್ ಪತ್ನಿ

ಬಿಗ್‌ ಬಾಸ್‌ ಕನ್ನಡ ಸೀಸನ್ 10ರಲ್ಲಿ(Big boss kannada season10) ಈ ಬಾರಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿನಯ್ ಗೌಡ. ತಮ್ಮ ಕೋಪ, ಬೈಗುಳ, ಕಿರುಚಾಟ ಮತ್ತು ಹೆಣ್ಣು ಮಕ್ಕಳ ಜೊತೆಗೆ ನಡೆದುಕೊಳ್ಳುತ್ತಿರುವ ರೀತಿಗೆ ಬಿಗ್ ಬಾಸ್ ವೀಕ್ಷಕರು ಕಿಡಿಕಾರುತ್ತಿದ್ದಾರೆ. ಇದರ ಜೊತೆಗೆ ಮನೆಯಲ್ಲಿರುವ ಇತರ ಸ್ಪರ್ಧಿಗಳು ಕೂಡ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹೌದು ಇಷ್ಟು ದಿನ ಸಂಗೀತಾ ಶೃಂಗೇರಿ ಅವರನ್ನು ಟಾರ್ಗೆಟ್ ಮಾಡಿದ್ದ ವಿನಯ್, ಈ ವಾರದ ಆರಂಭದಲ್ಲಿ ಭಾಗ್ಯಶ್ರೀ ಅವರಿಗೆ ಕಣ್ಣೀರು ಹಾಕಿಸಿದ್ದರು, ಅಲ್ದೇ ತನಿಷಾ ಅವರ ಮೇಲೆ ಕಿಡಿಕಾರುತ್ತಿದ್ದಾರೆ, ವಾಹಿನಿಯ ಹೊಸ ಪ್ರೋಮೋದಲ್ಲಿ(Promo) ಮತ್ತೆ ವಿನಯ್ ಗೌಡ, ನಟಿ ತನಿಷಾ ಕುಪ್ಪಂಡ ಅವರ ಮೇಲೆ ವಾಗ್ದಾಳಿ ನಡೆಸುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಹಳ್ಳಿ ಸೆಟ್ ಹಾಕಲಾಗಿದ್ದು, ಹಳ್ಳಿಯಲ್ಲಿನ ಆಟಗಳು, ಕೆಲಸಗಳನ್ನು ಟಾಸ್ಕ್ ಆಗಿ ನೀಡಲಾಗುತ್ತಿದೆ. ನಿನ್ನೆಯಿಂದಲೂ ವಿನಯ್ ಗೌಡ ಅವರ ಜಗಳ ಜೋರಾಗಿಯೇ ನಡೆಯುತ್ತಿದೆ. ಕಿತ್ತಾಟ, ವಾಗ್ವಾದಗಳು ನಡೆಯುತ್ತಿದ್ದು, ಬಿಗ್ ಬಾಸ್ ಮನೆ ರಣರಂಗವಾಗಿತ್ತು. ಈ ಕುರುಕ್ಷೇತ್ರವನ್ನು ನೋಡಿ ನೆಟ್ಟಿಗರು ವಿನಯ್ ನನ್ನ ಮನೆಯಿಂದ ಆಚೆ ಕಳ್ಸಿ, ಕಿಚ್ಚ ಸುದೀಪ್ ಸರಿಯಾಗಿ ಕ್ಲಾಸ್ ತೆಗೆದುಕೊಳ್ಳಬೇಕು ಅಂತೆಲ್ಲಾ ಹೇಳಿದ್ರು ಇದೀಗ ವಿನಯ್ ಪತ್ನಿ ಈ ವಿಚಾರವಾಗಿ ಮೊದಲ ಬಾರಿಗೆ ಮಾತನಾಡಿದ್ದು ಖಾಸಗಿ ವಾಹಿನಿಯ ಸಂದರ್ಶನಾದ ತುಣುಕುಗಳು ವೈರಲ್ ಆಗ್ತಿವೆ.

WhatsApp Group Join Now
Telegram Group Join Now

ಹೌದು ವಿನಯ್ ಅವರನ್ನು ಬಿಗ್ ಬಾಸ್ ಮನೆಯಲ್ಲಿ(Big boss House) ಬಿಂಬಿಸುತ್ತಿರುವ ರೀತಿ ಚೆನ್ನಾಗಿಲ್ಲ. ಆ ಬಗ್ಗೆ ಕೇಳಲು ಸಂಬಂಧ ಪಟ್ಟವರಿಗೆ ಫೋಸ್ ಮಾಡಿದರೂ ಅವರು ಪ್ರತಿಕ್ರಿಯೆ ನೀಡುತ್ತಿಲ್ಲ. ಅವರು ಕಷ್ಟ ಪಟ್ಟು ಮೇಲೆ ಬಂದಿದ್ದಾರೆ. ಅಂತ ವ್ಯಕ್ತಿ ಅಲ್ಲ ಅಂತ ಬೇಸರ ಹೊರಹಾಕಿದ್ದಾರೆ. ನನಗೆ ಅವರನ್ನು ಹಾಗೇ ನೋಡುವುದಕ್ಕೆ ಆಗುತ್ತಿಲ್ಲ. ಅಂತಹ ವ್ಯಕ್ತಿ ಅಲ್ಲ ಅವರು. ತುಂಬಾನೇ ಕಷ್ಟ ಪಟ್ಟು ಮೇಲೆ ಬಂದಿದ್ದಾರೆ. ಮೋಸ ಮಾಡಿ ಆಗಲಿ. ಇನ್ನೊಂದು ಮಾಡಿ ಮೇಲೆ ಬಂದಿಲ್ಲ. ಒಂದೊಂದು ಕೆಲಸನೂ ದೇವರಂತೆ ನೋಡಿ ಮೇಲೆ ಬಂದಿದ್ದಾರೆ. ಅಲ್ಲಿ ಅವರಿಗೆ ಮರ್ಯಾದೇನೆ ಇಲ್ಲ ಅನ್ನೋ ಹಾಗೆ ಮಾಡಿದ್ದಾರೆ ಅಂತ ವಿನಯ್ ಪತ್ನಿ ಅಕ್ಷತಾ ಕಣ್ಣೀರು ಹಾಕಿದ್ದಾರೆ.

ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp

ಅಕ್ಷತಾ ವಿನಯ್ ಹೇಳಿದ್ದೇನು?

ಹೌದು ಬಿಗ್ ಬಾಸ್ ಮನೆಯಲ್ಲಿ ಎಲ್ಲರೂ ವಿನಯ್(Vinay) ವಿರುದ್ಧ ತಿರುಗಿಬಿದ್ದಿದ್ದಾರೆ. ಎಲ್ಲರಿಗಿಂತಲೂ ವಿನಯ್ ಸ್ಟ್ರಾಂಗ್ ಸ್ಪರ್ಧಿ ಅಂತಲೇ ಅನಿಸಿತ್ತು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ಅದರಲ್ಲೂ ವಿನಯ್ ಸ್ಟ್ರಾಂಗ್ ಕಂಟೆಸ್ಟೆಂಟ್ ಅಂತ ಅನಿಸಿಕೊಂಡಿದ್ದರು. ಏರು ಧ್ವನಿಯಲ್ಲಿ ಮಾತಾಡುತ್ತಾ ಬಿಗ್ ಬಾಸ್ ಮನೆಯಲ್ಲಿ ಡಾಮಿನೇಟ್ ಮಾಡುತ್ತಿದ್ದರು, ಈ ಹಿನ್ನೆಲೆಯಲ್ಲೇ ಕಿಚ್ಚ ಸುದೀಪ್ ಕೂಡ ವಿನಯ್ ಬಗ್ಗೆ ಮಾತಾಡಿದ್ದರು. ಆದ್ರೀಗ ಬಿಗ್‌ ಬಾಸ್‌ನಲ್ಲಿ ವಿನಯ್ ಅವರನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಅವರ ಪತ್ನಿ ಅಕ್ಷತಾ ವಿನಯ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಪತ್ನಿ ಅಕ್ಷತಾ ವಿನಯ್ ಕೂಡ ಅಸಮಧಾನ ಹೊರ ಹಾಕಿದ್ದಾರೆ.

ವಿನಯ್ ಬಿಗ್ ಬಾಸ್ ಮನೆಗೆ ಹೋಗಿದ್ದು ಖುಷಿಯಿದೆ. ಆದರೆ, ಅವರನ್ನು ತೋರಿಸುತ್ತಿರೋದು ಖುಷಿಯಿಲ್ಲ. ಅವರನ್ನು ಬಿಂಬಿಸುತ್ತಿರುವ ರೀತಿ ಖುಷಿಯಿಲ್ಲ. ಯಾಕೆ ಆ ರೀತಿ ಮಾಡುತ್ತಿದ್ದಾರೆ ಅನ್ನೋ ಬಗ್ಗೆ ನನಗೆ ತುಂಬಾನೇ ಬೇಜಾರಿದೆ. ಅವರೆಲ್ಲರನ್ನು ನೋಡಿದರೆ ವಿನಯ್ ಮಾತ್ರ ಡಿಫ್ರೆಂಟ್ ಆಗಿದ್ದಾರೆ ಅಂತ ಅನಿಸುತ್ತಾರೆ. ಮನೆಯೊಳಗೆ ಎಲ್ಲರೊಂದಿಗೂ ಫ್ರೆಂಡ್ಲಿಯಾಗಿದ್ದಾರೆ. ಆ ಬಗ್ಗೆ ಖುಷಿಯಾಗಿದೆ. ಆದರೆ, ಯಾಕೆ ಹೀಗೆ ಬಿಂಬಿಸುತ್ತಿದ್ದಾರೆ ಅಂತ ಬೇಜಾರಿದೆ ಎಂದು ಅಕ್ಷತಾ ವಿನಯ್ ಆರೋಪಿಸಿದ್ದಾರೆ.

ಅಲ್ದೇ ಮಾತು ಮುಂದುವರೆಸಿ ಸಂಗೀತ ಮತ್ತೆ ವಿನಯ್ ನಡುವೆ ಅಂತ ಜಗಳವೆನು ಇಲ್ಲ ಆದ್ರೆ ಬಿಗ್ ಬಾಸ್ ಮನೆಯಲ್ಲಿ ಯಾಕ್ ಆಗೇ ಆಗ್ತಿದೆ ಅಂತ ಗೊತ್ತಾಗುತ್ತಿಲ್ಲ. ಜೊತೆಗೆ ಬಿಗ್ ಬಾಸ್ ಆರಂಭ ಆದಲ್ಲಿಂದ ವಿನಯ್‌ರನ್ನು ನೆಗೆಟಿವ್ ಆಗಿಯೇ ತೋರಿಸುತ್ತಿದ್ದಾರೆ. ನಾಲ್ಕು ವಾರಗಳಾದರೂ ಹೀಗೆ ನಡೆಯುತ್ತಿದೆ ಎಂದು ಅಕ್ಷತಾ ವಿನಯ್ ಆರೋಪ ಮಾಡಿದ್ದಾರೆ. ಈ ಮಧ್ಯೆ ಎರಡು ವಾರ ಕಾದೆ ನಾನು.. ಮೂರನೇ ವಾರನೂ ಕಂಟಿನ್ಯೂ ಆಯ್ತು. ನಾಲ್ಕನೇ ವಾರ ಇನ್ನೂ ಹೆಚ್ಚಾಯ್ತು. ವಿನಯ್ ವಿನಯ್ ಅಂತಲೇ Promo ಬಿಡುತ್ತಿದ್ದಾರೆ ಹೊರತು, ಅಲ್ಲಿ ವಿನಯ್ ಬಗ್ಗೆ ಇವತ್ತಿನವರೆಗೂ ಒಳ್ಳೆಯದನ್ನು ತೋರಿಸಿಲ್ಲ.

ವಿನಯ್ ಅವ್ರನ್ನ ಈ ರೀತಿ ತೋರಿಸೋ ಉದ್ದೇಶವಿರಲಿಲ್ಲ. ಆದರೂ ಯಾಕೆ ಹೀಗೆ ತೋರಿಸುತ್ತಿದ್ದಾರೋ ಗೊತ್ತಿಲ್ಲ.” ಎಂದು ಅಕ್ಷತಾ ವಿನಯ್ ಹೇಳಿದ್ದಾರೆ. ಅಲ್ದೇ ಅವರ ಒಳ್ಳೆತನವನ್ನು ಹೈಲೈಟ್ ಮಾಡುತ್ತಿಲ್ಲ. ಮನೆಯಲ್ಲಿ ಇದ್ಮೇಲೆ ಕತ್ತೆ ಅನ್ನೋದು ಅದು ಇದೂ ಅಂತ ಮಾತಾಡುತ್ತಾರೆ. ತಮಾಷೆಗೂ ಅದನ್ನು ಹೇಳಬಹುದು. ತಮಾಷೆಗೆ ಹೇಳಿರುವುದನ್ನೂ ಸೀರಿಯಸ್ ಆಗಿ ತೆಗೆದುಕೊಂಡು ಅದನ್ನೇ ಪ್ರೋಮೊ ಮಾಡಿ ಹಾಕುತ್ತಿದ್ದಾರೆ. ಅದ್ಯಾಕೆ ಅಂತ ಕೇಳೋಣ ಅಂತ ಚಾನೆಲ್‌ಗೆ ಬಹಳಷ್ಟು ಬಾರಿ ಫೋನ್ ಮಾಡಿದೆ. ಆದರೆ, ಅವರು ಪ್ರತಿಕ್ರಿಯೆ ನೀಡಲಿಲ್ಲ ಎಂದು ಅಕ್ಷತಾ ವಿನಯ್ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ನವೆಂಬರ್ ತಿಂಗಳಿನಲ್ಲಿ ಈ ನಾಲ್ಕು ಗ್ರಹಗಳ ಸಂಚಾರದಿಂದ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram