Hostel Hudugaru Bekagiddare: ರಮ್ಯ ವಿರುದ್ಧ ಗೆದ್ದ ಹಾಸ್ಟೆಲ್ ಹುಡುಗರು! ಸಿನಿಮಾ ಬಿಡುಗಡೆಗೆ ಕೋರ್ಟ್ ಅನುಮತಿ..

Hostel Hudugaru Bekagiddare: ಹೊಸಬರೇ ಇರುವ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಟ್ರೈಲರ್‌ ಕೆಲವೇ ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಇದರಲ್ಲಿ ರಮ್ಯಾ ಲೆಕ್ಚರರ್‌ ಪಾತ್ರದಲ್ಲಿ ಗಮನ ಸೆಳೆದಿದ್ದರು. ಆಗ ಮೋಹಕ ತಾರೆ ರಮ್ಯಾ ಬಹು ವರ್ಷಗಳ ಬಳಿಕ ಕಮ್‌ಬ್ಯಾಕ್‌ ಆಗಿದ್ದನ್ನು ನೋಡಿ ಫ್ಯಾನ್ಸ್‌ ಸಖತ್‌ ಖುಷ್‌ ಆಗಿದ್ದರು. ಆದರೆ ನಟಿ ರಮ್ಯಾ ಸಿನಿಮಾ ತಂಡಕ್ಕೆ ಲೀಗಲ್​ ನೋಟಿಸ್​ ಕಳುಹಿಸಿದ್ದರು, ಅಲ್ದೇ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಅಂತಲೂ ರಮ್ಯ ಒತ್ತಾಯಿಸಿದ್ದರು. ತಮ್ಮ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೆ ಬಳಸಲಾಗಿದೆ ಅಂತ ರಮ್ಯ ತಕರಾರು ತೆಗೆದಿದ್ದರು.

WhatsApp Group Join Now
Telegram Group Join Now

ತಮ್ಮ ಒಪ್ಪಿಗೆ ಇಲ್ಲದೇ ಯಾವ ದೃಶ್ಯ ಬಳಸಬಾರದು ಅಂತ ಸಿನಿಮಾ ತಡೆಯಾಜ್ಞೆ ನೀಡಿದ್ದರು. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಹಾಗೂ ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೊ, ಸುದ್ದಿ ಮತ್ತಿತ್ತರ ಕಂಟೆಂಟ್​ಗಳನ್ನು ತೆಗೆದುಹಾಕಬೇಕು ಅಂತ ರಮ್ಯಾ ಡಿಮ್ಯಾಂಡ್​ ಮಾಡಿ ಕೋಟಿ ರೂಪಾಯಿ ಪರಿಹಾರ ನೀಡಬೇಕು ಅಂತ ನೋಟಿಸ್​ನಲ್ಲಿ ಒತ್ತಾಯಿಸಿದ್ದರು. ಆದ್ರೆ ಇದೀಗ ರಮ್ಯ ವಿರುದ್ಧದ ಕಾನೂನು ಹೋರಾಟದಲ್ಲಿ ಹಾಸ್ಟೇಲ್ ಬಾಯ್ಸ್ ಗೆ ಗೆಲುವು ಸಿಕ್ಕಿದೆ.

ಹೌದು ಜುಲೈ 21ರಂದು ಸಿನಿಮಾ ಬಿಡುಗಡೆಯಾಗಲು ಸಜ್ಜಾಗಿತ್ತು, ಅಷ್ಟೇ ಅಲ್ಲದೇ ರಮ್ಯಾ(Ramya) ಅವರು ಈ ಸಿನಿಮಾದ ಪ್ರೋಮೊ ಶೂಟ್​ನಲ್ಲಿ ಭಾಗಿ ಆಗಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿ, ಸಡನ್‌ ಆಗಿ ರಮ್ಯ ಲೀಗಲ್‌ ನೋಟಿಸ್‌ ನೀಡಿದ್ದು ಕುತೂಹಲಕ್ಕೆ ಕಾರಣವಾಗಿತ್ತು. ಕಾರಣ ಚಿತ್ರದ ಟ್ರೇಲರ್. ಹೌದು ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್​ ಗಮನ ಸೆಳೆದಿಟ್ಟು, ಇದರಲ್ಲಿ ರಮ್ಯಾ, ರಿಷಬ್​ ಶೆಟ್ಟಿ, ದಿಗಂತ್​, ಪವನ್​ ಕುಮಾರ್ ಮುಂತಾದವರು ಕಾಣಿಸಿಕೊಂಡಿದ್ದಾರೆ.

ಇದ್ರಿಂದ ಚಿತ್ರದ ಮೇಲಿನ ನಿರೀಕ್ಷೆಗೆ ಹೆಚ್ಚಾಗಿ ಒಳ್ಳೆ ವಿವ್ಸ್ ಪಡೆದುಕೊಂಡಿತ್ತು ಆದರೆ ಈ ಟ್ರೇಲರ್​ ಅನ್ನು ಯೂಟ್ಯೂಬ್​ ಮುಂತಾದ ಕಡೆಗಳಿಂದ ತೆಗೆದು ಹಾಕಬೇಕು ಅಂತ ಕೋರ್ಟ್​ ಆದೇಶಿಸಿದೆ ಅಂತ ರಮ್ಯ ನೀಡಿದ್ದ ಲೀಗಲ್​ ನೋಟೀಸ್​ನಲ್ಲಿ ತಿಳಿಸಲಾಗಿತ್ತು. ಹೀಗಾಗಿ ಚಿತ್ರತಂಡಕ್ಕೆ ಇದು ದೊಡ್ಡ ತಲೆನೋವಾಗಿತ್ತು. ಅಲ್ದೇ ಜುಲೈ 21ಕ್ಕೆ ಸಿನಿಮಾ ಬಿಡುಗಡೆ ಆಗತ್ತೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಆದರೆ ಕೋರ್ಟ್​ನಲ್ಲಿ ರಮ್ಯಾ ಅವರ ಅರ್ಜಿ ವಜಾ ಆಗಿದ್ದು, ಸಿನಿಮಾ ಬಿಡುಗಡೆಗೆ ಅನುಮತಿ ಸಿಕ್ಕಿದೆ.

ಇದನ್ನೂ ಓದಿ: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿಯನ್ನ ಹೀಗೆ ಸಲ್ಲಿಸಬೇಕು! ಎಲ್ಲಿ ಬೇಕಾದರಲ್ಲಿ ಅರ್ಜಿಸಲ್ಲಿಸೋಕಾಗಲ್ಲ!?

ವಿಘ್ನಗಳ ನಡುವೆಯೂ ರಿಲೀಸ್ ಆಗ್ತಿದೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರ

ಸದ್ಯ ಈ ಸಿನಿಮಾ ನಿತಿನ್​ ಕೃಷ್ಣಮೂರ್ತಿ ಅವರ ನಿರ್ದೇಶನದಲ್ಲಿ ಮೂಡಿಬಂದಿದ್ದು, ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ(Hostel Hudugaru Bekagiddare) ಸಿನಿಮಾಗೆ ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿದ್ದು ಹಾಡುಗಳು ಗಮನ ಸೆಳೆದಿವೆ.ಇನ್ನು ಅರವಿಂದ್​ ಎಸ್​. ಕಶ್ಯಪ್​ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ಅಲ್ದೇ ರಕ್ಷಿತ್​ ಶೆಟ್ಟಿ ಒಡೆತನದ ‘ಪರಂವಾ ಪಿಕ್ಚರ್ಸ್​’ ಮೂಲಕ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆ ಆಗುತ್ತಿದೆ. ಸದ್ಯ ಕೋರ್ಟ್​​ನಲ್ಲಿ ತಮ್ಮ ಪರವಾಗಿ ತೀರ್ಪು ಬಂದಿರುವುದಕ್ಕೆ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾತಂಡದವರು ನಿಟ್ಟುಸಿರು ಬಿಟ್ಟಿದ್ದಾರೆ.

ಜೊತೆಗೆ ನರ್ತಕಿ ಚಿತ್ರಮಂದಿರದ ಎದುರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಇನ್ನು ಈ ಸಿನಿಮಾದಲ್ಲಿ ಅನೇಕ ಹೊಸ ಕಲಾವಿದರು ನಟಿಸಿದ್ದು, ವಿಶೇಷವಾದ ಪ್ರಮೋಷನ್​ ವಿಡಿಯೋಗಳ ಮೂಲಕ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಹೌದು ಈ ಮೊದಲು ಪುನೀತ್​ ರಾಜ್​ಕುಮಾರ್​ ಕೂಡ ಈ ಚಿತ್ರದ ಪ್ರಮೋಷನಲ್​ ವಿಡಿಯೋದಲ್ಲಿ ಕಾಣಿಸಿಕೊಂಡು ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದರು.ಸದ್ಯ ಈ ಸಿನಿಮಾ ಬಿಡುಗಡೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಅದೇನೆ ಇರಲಿ ಹೊಸಬರ ತಂಡದ ‘ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮಾಡಿರುವ ಸದ್ದು ಯಾವ ಸ್ಟಾರ್‌ ಚಿತ್ರಕ್ಕೂ ಕಡಿಮೆ ಇಲ್ಲ. ಈ ಹೊಸ ಹುಡುಗರ ಜತೆಗೆ ಸ್ಯಾಂಡಲ್‌ವುಡ್‌ನ ಜನಪ್ರಿಯ ತಾರೆಯರಾದ ದಿಗಂತ್‌, ರಿಷಬ್‌ ಶೆಟ್ಟಿ, ನಿರ್ದೇಶಕ ಪವನ್‌ ಕುಮಾರ್‌ ಸಹ ನಟಿಸಿದ್ದಾರೆ. ಆದ್ರೆ ಮೋಹಕ ತಾರೇ ರಮ್ಯ ಖ್ಯಾತೆಯಿಂದ ಚಿತ್ರತಂಡ ಸ್ವಲ್ಪ ಆತಂಕ ಪಡುವಂತೆ ಆಗಿತ್ತು ಆದ್ರೆ ಈಗ ಎಲ್ಲವು ಸರಿ ಹೋಗಿದ್ದು ಯಾವ ರೀತಿಯಾಗಿ ದೊಡ್ಡ ಪರದೆ ಮೇಲೆ ಹಾಸ್ಟೇಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಸೌಂಡ್ ಮಾಡುತ್ತೋ ನಾಳೆ ಗೊತ್ತಾಗಲಿದೆ.

ಇದನ್ನೂ ಓದಿ: ಸುದೀಪ್ ಕಾಂಟ್ರವರ್ಸಿ ಬಗ್ಗೆ ಶಿವಣ್ಣ ಖಡಕ್ ಮಾತು; ನನ್ನ ತಮ್ಮ ಸುದೀಪ್ ಅವನು ತಪ್ಪು ಮಾಡಿಲ್ಲ!?

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram