ಕರಿಮಣಿ ಮಾಲೀಕ ಇನ್ಮುಂದೆ ನಾನಲ್ಲ; ಅಧಿಕೃತವಾಗಿ ವಿಚ್ಚೇಧನದ ಬಗ್ಗೆ ಹೇಳಿಕೊಂಡ ಕಿರಿಕ್ ಕೀರ್ತಿ!

ಪತ್ರಕರ್ತ ಹಾಗೂ ಬಿಗ್ ಬಾಸ್ ಕನ್ನಡ ಖ್ಯಾತಿಯ ಕಿರಿಕ್ ಕೀರ್ತಿ ತಮ್ಮ ವೈವಾಹಿಕ ಜೀವನಕ್ಕೆ ಅಧಿಕೃತವಾಗಿ ಗುಡ್‍ ಬೈ ಹೇಳಿದ್ದಾರೆ. ಈ ಬಗ್ಗೆ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮಹತ್ವದ ಘೋಷಣೆ ಮಾಡಿದ್ದಾರೆ. ಹೌದು ಈ ಹಿಂದೆಯೂ ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳಿಂದ ಡಿಪ್ರೆಷನ್‌ಗೆ ಹೋಗಿದ್ದೆ. ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ತುಂಬಾ ಡಿಸ್ಟರ್ಬ್ ಮಾಡಿತ್ತು. ಹೀಗಾಗಿ ಜಗತ್ತಿಗೆ ವಿದಾಯ ಹೇಳುವ ನಿರ್ಧಾರ ಮಾಡಿದ್ದೆ ಎಂಬ ವಿಚಾರವನ್ನು ಬಹಿರಂಗಪಡಿಸಿದ್ದರು. ಅಲ್ದೆ ತಮ್ಮ ವೈಯಕ್ತಿಕ ಜೀವನದಲ್ಲಿ ಉಂಟಾದ ನೋವಿನ ಕಣ್ಣೀರಿನ ಕಥೆಯನ್ನು ಅಭಿಮಾನಿಗಳೊಂದಿಗೆ ಅವರು ಹಂಚಿಕೊಂಡಿದ್ದರು.

WhatsApp Group Join Now
Telegram Group Join Now

ಆದ್ರೆ ಇದೀಗ ಮತ್ತೊಂದು ಗಟ್ಟಿ ನಿರ್ಧಾರವನ್ನ ತೆಗೆದುಕೊಂಡಿರುವ ಕಿರಿಕ್ ಕೀರ್ತಿ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಒಂದನ್ನ ಹಂಚಿಕೊಂಡಿದ್ದು ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲವೆಂದು ಕಿರಿಕ್ ಕೀರ್ತಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಹೊಸ ಸಿನಿಮಾಗೆ ನಾಯಕಿಯಾಗಿ ಆಂಕರ್ ಜಾಹ್ನವಿ ಎಂಟ್ರಿ!

ವೈವಾಹಿಕ ಜೀವನಕ್ಕೆ ಅಂತ್ಯವಾಡಲು ಕಾರಣ ಏನ್ ಗೊತ್ತಾ?

ಹೌದು ಕೆಲವು ದಿನಗಳಿಂದ ಕಿರಿಕ್ ಕೀರ್ತಿ ಮತ್ತು ಅರ್ಪಿತಾ ನಡುವಿನ ಸಂಬಂಧದ ಕುರಿತು ಸಾಕಷ್ಟು ಚರ್ಚೆಗಳು ಟ್ರೊಲ್ ಗಳು ಆಗಿತ್ತು.. ಅಲ್ದೆ ಕಿರಿಕ್ ಕೀರ್ತಿ ಸಾಯೋ ನಿರ್ಧಾರವನ್ನ ಕೂಡ ಮಾಡಿಬಿಟ್ಟಿದ್ರು, ಹೌದು ಆ ಪೋಸ್ಟ್ ಕೂಡ ಸಾಕಷ್ಟು ವೈರಲ್ ಆಗಿತ್ತು. ಏನಂದ್ರೆ ನಿರ್ಧಾರ ಮಾಡಿಬಿಟ್ಟಿದ್ದೆ…ಜಗತ್ತಿಗೆ ವಿದಾಯ ಹೇಳಿಬಿಡಬೇಕು ಅಂತ…ಕಾರಣಗಳು ಹಲವು…ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳು ನನ್ನನ್ನು ಇನ್ನಿಲ್ಲದಂತೆ ಕುಗ್ಗಿಸಿತ್ತು… ಜೀವನದ ಮೇಲೊಂದು ಕೆಟ್ಟ ನಿರಾಸಕ್ತಿ ಬಂದಿತ್ತು. ಎಲ್ಲ ಪ್ರಯತ್ನಗಳೂ ಕೈಕೊಡ್ತಿತ್ತು. ಒಂದು ಕಡೆ ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ಡಿಸ್ಟರ್ಬ್ ಮಾಡಿತ್ತು. ಸೋಷಿಯಲ್ ಮೀಡಿಯಾದಿಂದಲೂ ಸ್ವಲ್ಪ ದೂರವೇ ಇದ್ದೆ. ಆದ್ರೆ ಈಗ ಎಲ್ಲದಕ್ಕೂ ಹೆದರಿ ಹೋಗಿಬಿಟ್ರೆ ನನ್ನನ್ನು ಈ ಪರಿಸ್ಥಿತಿಗೆ ತಂದವರಿಗೆ ಉತ್ತರ ಕೊಡೋದು ಹೇಗೆ..? ನನ್ನ ನಂಬಿ ಇನ್ವೆಸ್ಟ್ ಮಾಡಿರೋರಿಗೆ ನ್ಯಾಯ ಸಿಗೋದು ಹೇಗೆ…? ನನ್ನ ಮಗನ ಭವಿಷ್ಯ ಕಟ್ಟೋದು ಹೇಗೆ..? ಈ ಪ್ರಶ್ನೆಗಳು ಕಾಡಿದವು.

ಹೀಗಾಗಿ ನಂತರ ಟೈಪ್ ಮಾಡಿದ ಡೆತ್ ನೋಟ್ ಡಿಲೀಟ್ ಮಾಡ್ದೆ. 10 ನಿಮಿಷ ಧ್ಯಾನ ಮಾಡಿದೆ. ತಡವಾದ್ರೂ ಪರವಾಗಿಲ್ಲ ನನ್ನ ನಂಬಿದ ಎಲ್ಲರಿಗೂ ಅವರಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳೋ ಹಾಗೆ ಸಾಧಿಸಬೇಕು ಅಂತ ಡಿಸೈಡ್ ಮಾಡ್ದೆ. ಮನಸ್ಸಲ್ಲಿದ್ದ ಕೆಟ್ಟ ಅಲೋಚನೆಗಳನ್ನು ಕಿತ್ತು ಬಿಸಾಕಿದ್ದೇನೆ. ಕೆಲವರನ್ನು ಕಳೆದುಕೊಂಡಿದ್ದರ ಹೊರತು ಬೇರೆ ಎಲ್ಲವನ್ನೂ ಟ್ರ್ಯಾಕಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡ್ತೀನಿ. ನಿಮ್ಮ ಬೆಂಬಲ‌ ಜೊತೆಗಿರಲಿ. ಡಿಪ್ರೆಷನ್‌ನಿಂದ ಮತ್ತೆ ವಾಪಸ್ ಬರಲು ಸಹಕರಿಸಿ. ಮತ್ತೆ ನನ್ನ ಮುಖದ ಮೇಲಿನ ನಗು ವಾಪಸ್ ತರುವ ತನಕ ಪ್ರಯತ್ನ‌ ನಿರಂತರ… ಇದು ಹೇಳಿಕೊಳ್ಳಬಾರದ ವಿಷಯ.. ಆದ್ರೆ ಹೇಳಿಕೊಂಡರಷ್ಟೆ ಸಮಾಧಾನ’ ಎಂದು ಕಿರಿಕ್ ಕೀರ್ತಿ ಪೋಸ್ಟ್ ನಲ್ಲಿ ಬರೆದುಕೊಂಡಿದ್ದರು. ಆದ್ರೆ ಇದೀಗ ವೈವಾಹಿಕ ಜೀವನದಿಂದ ಮುಕ್ತಿ ಪಡೆದುಕೊಂಡೆ ಅಂತ ಬರೆದುಕೊಂಡಿರೋದು ಮತ್ತೆ ಪ್ರಶ್ನೆ ಮೂಡಿಸಲು ಕಾರಣವಾಗಿದೆ.

ತಮ್ಮ ವಿಚ್ಚೇದನ ಕುರಿತು ಸೋಶಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ ಕಿರಿಕ್ ಕೀರ್ತಿ

ಹೌದು ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ ಅಂತ ಅಧಿಕೃತವಾಗಿ ವಿಚ್ಛೇದನ ಕುರಿತು ಕಿರಿಕ್ ಕೀರ್ತಿ ಹೇಳಿಕೊಂಡಿದ್ದಾರೆ. ಹೌದು ಸಕಲವೂ ಸನ್ಮಂಗಳವಾಗಲಿ… 🙏🙏🙏ಅಂತ ಶುರು ಮಾಡಿರುವ ಕಿರಿಕ್ ಕೀರ್ತಿ ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ.. ಅಧಿಕೃತವಾಗಿ ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ. ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ, ಕಹಿನೆನಪುಗಳು ಮರೆತು ಹೊಸಜೀವನಕ್ಕೆ ನಾಂದಿ ಹಾಡಲಿ, ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರಿಯಲಿ ಎಂದು ಬರೆದಿರುವ ಕಿರಿಕ್ ಕೀರ್ತಿ ಇದನ್ನ ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಶೇರ್ ಮಾಡಿದ್ದಾರೆ. ಆದ್ರೆ ವಿಚ್ಛೇದನವನ್ನು ಪಡೆಯಲು ಕಾರಣ ಏನು ಅನ್ನೋದು ಗೊತ್ತಿಲ್ಲ ಆದ್ರೆ ಕೆಲವೊಂದು ಸಮಸ್ಯೆಗಳು ಇತ್ತು ಅನ್ನೋದನ್ನ ಹಿಂದೆಯೂ ಹೇಳಿಕೊಂಡಿದ್ರು ಈಗಲೂ ಹೇಳಿಕೊಂಡಿದ್ದಾರೆ. ಆದ್ರೆ ಆಗಿದ್ದೇನು ಅನ್ನೋದು ಗೊತ್ತಿಲ್ಲ. ಈ ವೊಂದು ಪೋಸ್ಟ್ ಹಂಚಿಕೊಂಡ ನಂತರ ಮಗನೊಟ್ಟಿಗಿನ ಫೋಟೋ ಒಂದನ್ನ ಕೀರ್ತಿ ಶೇರ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಕೊನೆಗೂ ಸಿಕ್ಕಿದ್ರು “ಜಿಂಗಿಚಾಕ ಜಿಂಗಿಚಾಕ” ಹಾಡಿದ್ದ ಗಾಯಕ, ಇವರೇ ನೋಡಿ ಕನ್ನಡದ ಖ್ಯಾತ ನಟ

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram