ಇನ್ನುಂದೆ ಪ್ರತಿ ತಿಂಗಳು ಯಾವ ದಿನ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ ಗೊತ್ತಾ? ಪ್ರಕ್ರಿಯೆಯನ್ನ ಸುವ್ಯಸ್ಥಿತಗೊಳಿಸೋದಾಗಿ ಹೇಳಿದ ಸಚಿವೆ

ಮನೆಯ ಯಜಮಾನಿಯರಿಗೆ ಮಾಸಿಕ 2000 ರೂ.ಗಳನ್ನು ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ(Gruha Lakshmi Scheme) ಶೇ.ನೂರರಷ್ಟು ಯಶಸ್ವಿಯಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರತಿ ಕುಟುಂಬದ ಯಜಮಾನಿಗೆ ಧನಸಹಾಯ ನೀಡುವ ಈ ಗೃಹಲಕ್ಷ್ಮಿ ಯೋಜನೆ ಆರಂಭವಾದ ಸೆಪ್ಟಂಬರ್ ತಿಂಗಳಿನಿಂದ ಇದುವರೆಗೂ ನೊಂದಣಿ ಮಾಡಿಕೊಂಡಿರುವ 1.2 ಕೋಟಿ ಗೃಹಿಣಿಯರ ಪೈಕಿ 26 ಲಕ್ಷ ಯಜಮಾನಿಯರಿಗೆ ಹಣ ತಲುಪಿಲ್ಲ. ಆಗಸ್ಟ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಈ ಯೋಜನೆಗೆ ಚಾಲನೆ ನೀಡಿದ್ದರು. ಆದ್ರೆ ಯೋಜನೆ ಜಾರಿಗೊಂಡ ನಂತರ ಶೇ.88ರಷ್ಟು ಗೃಹಿಣಿಯರು ಮೊದಲ ತಿಂಗಳ ಹಣವನ್ನು ಪಡೆದುಕೊಂಡಿದ್ದಾರೆ. ಆದರೆ ನಂತರದ ಕಂತು ತಲುಪಿಲ್ಲ ಎಂದು ರಾಜ್ಯದ ಬಹುತೇಕ ಜಿಲ್ಲೆ ಮತ್ತು ತಾಲ್ಲೂಕುಗಳ ಗೃಹಿಣಿಯರು ಅಸಮಾಧಾನ ವ್ಯಕ್ತಪಡಿಸಿದ್ರು, ಸರ್ಕಾರ ಕೂಡ ಕುಂಟು ನೆಪ ಹೇಳ್ತಾನೆ ಸಾಗಿತ್ತು.

WhatsApp Group Join Now
Telegram Group Join Now

ಅದ್ರಿಗ ಲೋಕಸಭೆ ಚುನಾವಣೆ ಬೆನ್ನಲ್ಲೆ ಗ್ಯಾರಂಟಿ ಸಮರ್ಪಕ ಜಾರಿಗೆ ಸರ್ಕಾರ ಕಸರತ್ತು ನಡೆಸುತ್ತಿದೆ. ಹೌದು ಗೃಹಲಕ್ಷ್ಮಿ ಹಣ(Amount) ವಿಳಂಬವಾಗುತ್ತಿದ್ದ ಬೆನ್ನಲ್ಲೇ ಫಲಾನುಭವಿಗಳಿಗೆ ಹಣ ತಲುಪಿಸೋಕೆ ನಿಗದಿತ ಡೆಡ್‍ಲೈನ್ ಅನ್ನು ಆರ್ಥಿಕ ಇಲಾಖೆ ನೀಡಿದೆ. ಆರ್ಥಿಕ ಇಲಾಖೆಯ ಡಿಡಿಓಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಈ ಮೂಲಕ ಹಣ ತಲುಪಲು ಪ್ರತಿ ತಿಂಗಳಲ್ಲೂ ದಿನಾಂಕ ಫಿಕ್ಸ್ ಮಾಡಲಾಗುತ್ತಿದೆ. ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಖಾತೆಗೆ ಜಮೆ ಆಗಲು ಇನ್ಮುಂದೆ ಡೆಡ್ ಲೈನ್ ಇರಲಿದೆ.

ಮಹಿಳಾ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ.ಗಳ ಆರ್ಥಿಕ ನೆರವು ನೀಡುವ ಕರ್ನಾಟಕ ಕಾಂಗ್ರೆಸ್ ಗೃಹ ಲಕ್ಷ್ಮಿ ಯೋಜನೆಯ ಮೊದಲ ಕಂತನ್ನು ಇನ್ನೂ 20 ಲಕ್ಷಕ್ಕೂ ಹೆಚ್ಚು ಮಹಿಳೆಯರು ಸ್ವೀಕರಿಸಿಲ್ಲ ಎಂದು ಆರೋಪಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರವು ಆಗಸ್ಟ್ 30 ರಂದು ಈ ಯೋಜನೆಯನ್ನು ಪ್ರಾರಂಭಿಸಿತು ಮತ್ತು ಹಣವನ್ನು ವರ್ಗಾಯಿಸುವಲ್ಲಿ ಹಲವಾರು ಅಡೆತಡೆಗಳನ್ನು ಎದುರಿಸಿದೆ. ಸದ್ಯ ಈಗ ಈ ವಿಷಯದ ಬಗ್ಗೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇಲಾಖೆ ಪ್ರಕ್ರಿಯೆಯನ್ನು ಸರಳಗೊಳಿಸುತ್ತಿದೆ. ಸರ್ಕಾರವು ಈ ತಿಂಗಳು 1.10 ಕೋಟಿ ಜನರಿಗೆ ಹಣವನ್ನು ಬಿಡುಗಡೆ ಮಾಡಿದೆ. ಈ-ಕೆವೈಸಿ(E-KYC) ವಿವರಗಳು ಮತ್ತು ಇ-ಆಡಳಿತದಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ, ಕೆಲವು ವಿಳಂಬಗಳಾಗಿವೆ.

ಮೊದಲ ಕಂತಿನಲ್ಲಿ ಹಣ ಪಡೆಯದ ಜನರು ಎರಡು ತಿಂಗಳು ಒಟ್ಟಿಗೆ ಹಣವನ್ನು ಪಡೆಯುತ್ತಿದ್ದಾರೆ. ನಾವು ಎಲ್ಲಾ ಬ್ಯಾಂಕುಗಳು ಮತ್ತು ನಮ್ಮ ಉದ್ಯೋಗಿಗಳೊಂದಿಗೆ ಸಭೆಗಳನ್ನು ನಡೆಸುತ್ತಿದ್ದೇವೆ ಮತ್ತು ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸುತ್ತಿದ್ದೇವೆ ಅಂತ ಹೇಳಿದ್ದಾರೆ. ಇನ್ನು ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳ 20ಕ್ಕೆ ಹಾಕಲು ಆರ್ಥಿಕ ಇಲಾಖೆ ಸುತ್ತೋಲೆ ನೀಡಿದೆ. ಅನ್ನಭಾಗ್ಯದ ದುಡ್ಡನ್ನು 20 ದಿನಾಂಕದೊಳಗೆ ಪ್ರಕ್ರಿಯೆಗೆ ಸೂಚನೆ ನೀಡಲಾಗಿದೆ. ಹಾಗೆಯೇ ಗೃಹಲಕ್ಷ್ಮಿ ಹಣ ತಿಂಗಳ 15- 20 ರೊಳಗೆ ಜಮೆಗೆ ಸೂಚನೆ ನೀಡಲಾಗಿದೆ ಅಂತ ಮಾಹಿತಿ ಕೊಟ್ಟಿದ್ದಾರೆ.

ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp

15-20 ತಾರೀಖಿನ ಒಳಗೆ ಬರಲಿದ್ಯಾ ಯೋಜನೆಯ ಹಣ

ಹೌದು ಪ್ರತಿ ತಿಂಗಳು 15-20 ರ ದಿನಾಂಕಗಳ ನಡುವೆ ಹಣವನ್ನು ವರ್ಗಾಯಿಸುವುದಾಗಿ ಹಣಕಾಸು ಇಲಾಖೆ ಭರವಸೆ ನೀಡಿದೆ ಎಂದು ಸಚಿವರು ಹೇಳಿದ್ದಾರೆ. ಇನ್ನು ಪ್ರತಿ ತಿಂಗಳು 15-20 ದಿನಾಂಕಗಳಿಂದ ಹಣವನ್ನು ವರ್ಗಾಯಿಸುವ ಹಣಕಾಸು ಇಲಾಖೆಯ ಸುತ್ತೋಲೆಯನ್ನು ಅವರು ಸ್ವಾಗತಿಸಿದ್ದು, ಹಣಕಾಸು ಇಲಾಖೆಯ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಹಣವನ್ನು ಯಾವಾಗ ವರ್ಗಾಯಿಸಲಾಗುತ್ತದೆ ಎಂಬ ಬಗ್ಗೆ ಜನರು ಗೊಂದಲಕ್ಕೊಳಗಾಗಬಾರದು. ಈ ನಿರ್ಧಾರವು ಹಣವನ್ನು ಯಾವಾಗ ನಿರೀಕ್ಷಿಸಬೇಕು ಎಂಬುದರ ಬಗ್ಗೆ ಅವರಿಗೆ ಸಹಾಯ ಮಾಡುತ್ತದೆ. ಈ ಹಿಂದೆ, ಹಣ ಬಿಡುಗಡೆಯಾದ ನಂತರ ಪ್ರಕ್ರಿಯೆಯು 25 ದಿನಗಳನ್ನು ತೆಗೆದುಕೊಳ್ಳುತ್ತಿತ್ತು. ಈಗ ಅದನ್ನು ಕೇವಲ 6 ದಿನಗಳಿಗೆ ಇಳಿಸಲಾಗಿದೆ. 23 ಲಕ್ಷ ಜನರ ಈಕೆವೈಸಿ ಸಮಸ್ಯೆಗಳಿದ್ದು, ಅವುಗಳಲ್ಲಿ ಹೆಚ್ಚಿನವುಗಳನ್ನು ನಾವು ಪರಿಹರಿಸಿದ್ದೇವೆ ಮತ್ತು ಸುಮಾರು ಏಳು ಲಕ್ಷ ಪ್ರಕರಣಗಳು ಮಾತ್ರ ಬಾಕಿ ಉಳಿದಿವೆ, ಅವುಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇನ್ನು ಹಣ ವರ್ಗಾವಣೆಯಲ್ಲಿನ ಗೊಂದಲದಿಂದಾಗಿ ಹಲವಾರು ಮಹಿಳೆಯರು ಅದರ ಬಗ್ಗೆ ವಿಚಾರಿಸಲು ಬ್ಯಾಂಕುಗಳಿಗೆ ಮುಗಿಬೀಳುತ್ತಿದ್ದಾರೆ, ಇದು ಸಮಸ್ಯೆಗಳನ್ನು ಸೃಷ್ಟಿಸಿದೆ. ಮುಂದಿನ ತಿಂಗಳ ವೇಳೆಗೆ ಈ ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಇನ್ನು ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆಯಡಿ ಹಣ ವರ್ಗಾವಣೆ ವಿಳಂಬವಾಗುತ್ತಿರುವ ಮಧ್ಯೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಾಂತ್ರಿಕ ಸಮಸ್ಯೆಯಿಂದಾಗಿ ಹಣ ವರ್ಗಾವಣೆ ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸಲಾಗುತ್ತಿದೆ ಅನ್ನೋ ಭರವಸೆ ಕೊಟ್ಟಿರೋದು ಗೃಹಲಕ್ಷ್ಮಿಯರು ನಿಟ್ಟುಸಿರು ಬಿಡುವಂತೆ ಮಾಡಿದೆ. ಮುಂದಿನ ದಿನಗಳಲ್ಲಿ ಇದು ಎಷ್ಟು ವ್ಯವಸ್ಥಿತವಾಗಿರಲಿದೆ ಅನ್ನೋದನ್ನ ಕಾದು ನೋಡಬೇಕಿದೆ.

ಇದನ್ನೂ ಓದಿ: ಒಂದು ಕೋಟಿ ರೂಪಾಯಿ ಗಳಿಸುವ ಸುವರ್ಣ ಅವಕಾಶ ಜನತೆಗೆ ಸಿಹಿ ಸುದ್ದಿಯನ್ನು ನೀಡಿರುವ ಮೋದಿ ಸರ್ಕಾರ

ಇದನ್ನೂ ಓದಿ: ಗ್ರಾಹಕರಿಗೆ ಸಿಹಿ ಸುದ್ದಿ, ಹಲವು ವೈಶಿಷ್ಟ್ಯಗಳೊಂದಿಗೆ 53% ರಿಯಾಯಿತಿಯಲ್ಲಿ Samsung 5G ಫೋನ್ ಅನ್ನು ಪಡೆಯಬಹುದು.

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram