ಗೃಹಲಕ್ಷ್ಮೀಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್; ಚಿಟ್ ಫಂಡ್ ನಲ್ಲಿ ಮಹಿಳೆಯರಿಗೆ ಹಣ ಹೂಡಿಕೆಗೆ ಅವಕಾಶ

chit fund

chit fund: ರಾಜ್ಯ ಸರ್ಕಾರವು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2,000 ಗಿಫ್ಟ್ ಕೊಟ್ಟಿದ್ದು ಅದೇ ದುಡ್ಡನ್ನು ಮಹಿಳೆಯರು ಚಿಟ್‌ಫಂಡ್‌ನಲ್ಲಿ ಹೂಡಿಕೆ ಮಾಡುವ ಬೊಂಬಾಟ್ ಸ್ಕೀಮ್‌ನ್ನು ತರಲು ರೆಡಿ ಮಾಡಿದೆ. ಹೌದು ಕೇರಳ ಮಾದರಿಯ ನಯಾ ಚಿಟ್‌ಫಂಡ್‌ನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಎಂಎಸ್‌ಐಎಲ್‌ನಿಂದ ಏಪ್ರಿಲ್‌ನಲ್ಲಿ ಈ ನಯಾ ಸ್ವರೂಪದ ಚಿಟ್‌ಫಂಡ್ ರಾಜ್ಯದ್ಯಾಂತ ಜಾರಿಯಾಗಲಿದೆ. ಪ್ರಮುಖವಾಗಿ ಮಹಿಳೆಯರನ್ನು ಈ ಚಿಟ್‌ಫಂಡ್‌ನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಇನ್ನು ಗ್ಯಾರಂಟಿ ಸ್ಕಿಮ್‌ಗಳ ಅನಾವರಣ ಬಳಿಕ ಕರ್ನಾಟಕ ಸರ್ಕಾರವು ಉಳಿತಾಯ ಯೋಜನೆಗೆ ಹೊಸ ಪ್ಲ್ಯಾನ್ ಮಾಡಿಕೊಂಡಿದೆ. ಎಂಎಸ್‌ಐಎಲ್‌ ಚಿಟ್‌ ಫಂಡ್ ಮೂಲಕ ಜನರು ಹಣ ಉಳಿಸಲು ಸರ್ಕಾರ ಮುಂದಾಗಿದೆ. ಜನರು ಹಣ ಉಳಿತಾಯ ಮಾಡುವ ಯೋಜನೆ ಇದಾಗಿದ್ದು, ಸರ್ಕಾರ ಈಗಾಗಲೇ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದೆ. ಎಸ್‌ಐಎಲ್‌ನಲ್ಲಿ 10 ಸಾವಿರದ ವರೆಗೆ ಚಿಟ್‌ಫಂಡ್ ವ್ಯವಹಾರ ನಡೆಸಬಹುದಾಗಿದೆ ಅಂತ ಹೇಳಿದೆ. ಹೌದು ಗ್ಯಾರಂಟಿ ಗಿಫ್ಟ್ ಕೊಟ್ಟ ಸರ್ಕಾರದಿಂದ ನಯಾ ಪ್ಲ್ಯಾನ್‌ ಸಿದ್ದವಾಗಿದೆ. ಮಹಿಳೆಯರಿಗೆ ಗೃಹಲಕ್ಷ್ಮಿ ಗಿಫ್ಟ್ ಕೊಟ್ಟ ಸರ್ಕಾರ ಅದೇ ದುಡ್ಡನ್ನು ಮಹಿಳೆಯರು ಚಿಟ್‌ಫಂಡ್‌ನಲ್ಲಿ ಹೂಡಿಕೆ ಮಾಡುವ ಬೊಂಬಾಟ್ ಸ್ಕೀಮ್‌ನ್ನು ತರಲು ರೆಡಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಗ್ಯಾರಂಟಿ ಕೊಟ್ಟ ಸರ್ಕಾರದಿಂದ ಹೊಸ ಪ್ಲಾನ್

ಎಂಎಸ್‌ಐಎಲ್‌ನಿಂದ ಏಪ್ರಿಲ್‌ನಲ್ಲಿ ಈ ನಯಾ ಸ್ವರೂಪದ ಚಿಟ್‌ಫಂಡ್ ರಾಜ್ಯದ್ಯಾಂತ ಜಾರಿಯಾಗಲಿದೆ. ಪ್ರಮುಖವಾಗಿ ಮಹಿಳೆಯರನ್ನು ಈ ಚಿಟ್‌ಫಂಡ್‌ನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದ್ದು, ಮಹಿಳೆಯರಿಗೆ ಗೃಹಲಕ್ಷ್ಮಿಯ ಯೋಜನೆಯಿಂದ ಹಣ ಬರುತ್ತಿರುವುದರಿಂದ ಸರ್ಕಾರಿ ಸ್ವಾಮ್ಯದ ಎಂಎಸ್‌ಐಎಲ್ ಚಿಟ್‌ಫಂಡ್ ಉನ್ನತೀಕರಣಕ್ಕೆ ಪ್ಲ್ಯಾನ್‌ ಮಾಡಲಾಗಿದೆ. ಇನ್ನು ರಾಜ್ಯದಲ್ಲಿ ಬಹುತೇಕ ಪ್ರತಿ ಕುಟುಂಬಕ್ಕೂ ಗ್ಯಾರಂಟಿ ಯೋಜನೆಗಳಿಂದ ಹಣ ತಲುಪುತ್ತಿದೆ. ಈಗ ಉಳಿತಾಯಕ್ಕೆ ಹೆಚ್ಚು ಅವಕಾಶಗಳಿವೆ. ಹೀಗಾಗಿ ಎಂಎಸ್‌ಐಎಲ್‌ ಚಿಟ್‌ ಫಂಡ್‌ನಲ್ಲಿ ಗುಂಪುಗಳಿಗೆ ತಕ್ಕಂತೆ ಶೇಕಡ 13 ರಿಂದ 15ರವರೆಗೂ ಲಾಭ ದೊರಕುತ್ತದೆ. ಸರ್ಕಾರಿ ಸ್ವಾಮ್ಯದ ಸಂಸ್ಥೆಯಾಗಿರುವುದರಿಂದ ಹೂಡಿಕೆಯ ಮೊತ್ತಕ್ಕೂ ಖಾತರಿ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಹೌದು ಗೃಹಲಕ್ಷ್ಮಿ ಯೋಜನೆಯಿಂದ ದೊರಕುತ್ತಿರುವ ಹಣವನ್ನು ಮಹಿಳೆಯರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ತುರ್ತು ಬಳಕೆಯ ಉದ್ದೇಶಗಳಿಗಾಗಿ ಉಳಿತಾಯ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂಬುದು ಸರ್ಕಾರದ ಅಭಿಲಾಷೆ ಆಗಿದೆ. ಹೀಗಾಗಿ ಕೇರಳದಲ್ಲಿ 40 ಸಾವಿರ ಕೋಟಿ ರೂಪಾಯಿ ವಹಿವಾಟು ನಡೆಯುತ್ತಿದ್ದು ಕರ್ನಾಟಕದಲ್ಲಿ ಸದ್ಯ ಚಿಟ್‌ಫಂಡ್ ಉದ್ಯಮ 300 ಕೋಟಿ ರೂಪಾಯಿ ಮಾತ್ರವಿದೆ. ಹೀಗಾಗಿ 10 ಸಾವಿರ ಕೋಟಿ ರೂಪಾಯಿ ಲಾಭದಾಯಕವಾಗಿ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಗ್ರಾಮೀಣ ಭಾಗದಲ್ಲಿರುವ ಸ್ವಸಹಾಯ ಸಂಘಗಳ ಮೂಲಕ ಚಿಟ್‌ಫಂಡ್(chit fund) ಉದ್ಯಮ ಬಲಪಡಿಸುವ ಗುರಿಯನ್ನು ಹಾಕಲಾಗಿದೆ. ಚಿಟ್ ಫಂಡ್‌ನ ಅರ್ಥವನ್ನು ಅರ್ಥಮಾಡಿಕೊಂಡ ನಂತರ, ಅದರ ಕಾರ್ಯವನ್ನು ಅರ್ಥಮಾಡಿಕೊಳ್ಳುವುದು ಅವಶ್ಯಕ. ಚಿಟ್-ಫಂಡ್ ಯೋಜನೆಯ ಭಾಗವಾಗಿ, ಸಮಾನ ಸಂಖ್ಯೆಯ ಸದಸ್ಯರೊಂದಿಗೆ, ನೀವು ನಿಗದಿತ ಅವಧಿಯಲ್ಲಿ ನಿಗದಿತ ಮೊತ್ತದ ಹಣವನ್ನು ಸಂಗ್ರಹಿಸಬೇಕಾಗುತ್ತದೆ. ಹಣವನ್ನು ಸಂಗ್ರಹಿಸಿದ ನಂತರ, ಹರಾಜು ಅಥವಾ ಲಾಟರಿ ವ್ಯವಸ್ಥೆಯ ಮೂಲಕ, ಒಬ್ಬ ವ್ಯಕ್ತಿಯನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಹಣವನ್ನು ಆ ವ್ಯಕ್ತಿಗೆ ನೀಡಲಾಗುತ್ತದೆ. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೆರಲು ಇಲ್ಲಿ ಕ್ಲಿಕ್ ಮಾಡಿ

ಚಿಟ್ ಫಂಡ್‌ಗಳು(chit fund) ರಿವರ್ಸ್ ಹರಾಜು ಕಾರ್ಯವಿಧಾನವನ್ನು ಬಳಸುತ್ತವೆ, ಇದರಲ್ಲಿ ವಿಜೇತ ಬಿಡ್ಡರ್, ಪ್ರತಿ ಮಧ್ಯಂತರಕ್ಕೆ, ಚಿಟ್ ಫಂಡ್ ಆಪರೇಟರ್‌ಗೆ ಪೂಲ್ ಮಾಡಿದ ಹಣದ ಪೂರ್ವನಿರ್ಧರಿತ ಅನುಪಾತವನ್ನು ಕಮಿಷನ್ ಶುಲ್ಕವಾಗಿ ಪಾವತಿಸುತ್ತಾರೆ. ಕಮಿಷನ್ ಮತ್ತು ಇತರ ವೆಚ್ಚಗಳನ್ನು ಕಡಿತಗೊಳಿಸಿದ ನಂತರ, ಉಳಿದ ಮೊತ್ತವನ್ನು ಇತರ ಸದಸ್ಯರಿಗೆ ಲಾಭಾಂಶವಾಗಿ ಪಾವತಿಸಲಾಗುತ್ತದೆ. ಹೀಗಾಗಿ ಪ್ರತಿ ಮಧ್ಯಂತರದ ಕೊನೆಯಲ್ಲಿ ಬಹಿರಂಗ ಹರಾಜನ್ನು ನಡೆಸಲಾಗುತ್ತದೆ, ಇದು ಸದಸ್ಯರು ಸಂಗ್ರಹಿಸಿದ ಹಣವನ್ನು ಬಿಡ್ ಮಾಡಲು ಅವಕಾಶ ನೀಡುತ್ತದೆ. ಅಲ್ದೇ ಕಡಿಮೆ ಬಿಡ್ ಮಾಡಿದವರನ್ನು ವಿಜೇತ ಎಂದು ಘೋಷಿಸಲಾಗುತ್ತದೆ.

ಇದನ್ನೂ ಓದಿ: ಉಚಿತ ಮನೆಗಾಗಿ ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ? ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ಪಡೆಯೋದು ಹೇಗೆ?