ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟ ರೈತ ಸಂತೋಷ್; ಜೈಲಿನಿಂದ ಡೈರೆಕ್ಟ ಆಗಿ ಬಿಗ್ ಬಿ ಮನೆಗೆ ವರ್ತೂರ್ ಸಂತೋಷ್

ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಪ್ರಕರಣ ಹೆಚ್ಚು ಸದ್ದು ಮಾಡಿದ್ದು, ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರ್‌ ಸಂತೋಷ್‌ಗೆ ಶುಕ್ರವಾರ ಜಾಮೀನು ಸಿಕ್ಕಿದೆ. ಹೌದು ಹುಲಿ ಉಗುರು ಧರಿಸಿದ ಆರೋಪದ ಮೇರೆಗೆ ಬಿಗ್ ಬಾಸ್(Bg boss) ಕಾರ್ಯಕ್ರಮದ ಮನೆಯಿಂದಲೇ ವರ್ತೂರ್ ಸಂತೋಷ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇನ್ನು ಗುರುವಾರ ವರ್ತೂರ್ ಸಂತೋಷ್‌ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಬೆಂಗಳೂರಿನ ಕೋರ್ಟ್‌ ಶುಕ್ರವಾರ ಆದೇಶ ಪ್ರಕಟಿಸಿ, ವರ್ತೂರ್ ಸಂತೋಷ್‌ಗೆ ಜಾಮೀನು ನೀಡಿದೆ. ಹೌದು ಶುಕ್ರವಾರ ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯ ವರ್ತೂರ್ ಸಂತೋಷ್‌ಗೆ ಜಾಮೀನು ನೀಡಿದೆ. 4 ಸಾವಿರ ರೂ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ಹಾಕಿ ಜಾಮೀನು ಮಂಜೂರು ಮಾಡಲಾಗಿದೆ.

WhatsApp Group Join Now
Telegram Group Join Now

ಸದ್ಯ ಕಾರಾಗೃಹದಿಂದ ನೇರವಾಗಿ ಸಂತೋಷ್ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರಂತೆ. ಹೌದು ಈಗಾಗ್ಲೇ ಬಿಗ್ ಬಾಸ್ ಕಾರ್ಯಕ್ರಮ ಮೂರನೇ ವಾರ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಮಧ್ಯೆ ಹುಲಿ ಉಗುರು ಹೊಂದಿರುವ ಪ್ರಕಣದಲ್ಲಿ ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅವರನ್ನ ಪೋಲಿಸರು ಅರೆಸ್ಟ್‌ ಮಾಡಿದ್ದು, ಇದೀಗ ಜಾಮೀನು ಸಿಕ್ಕಿದೆ. ಈ ನಡುವೆ ಮತ್ತೆ ಬಿಗ್‌ ಬಾಸ್‌ ಮನೆಗೆ ರೀ ಎಂಟ್ರಿಯಾಗಿದ್ದಾರೆ ಅಂತ ಹೇಳಲಾಗಿದೆ. ಅಲ್ಲದೇ ಈ ವಿಕೇಂಡ್‌ ಎಪಿಸೋಡ್‌ ನಲ್ಲಿ ವರ್ತೂರ್‌ ಸಂತೋಷ್‌ ಭಾಗಿಯಾಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp

ಇಂದು ಬಿಗ್ ಬಾಸ್ ಮನೆಗೆ ಸಂತೋಷ್ ಎಂಟ್ರಿ

ಇನ್ನು ಜಾಮೀನು ದೊರೆತ ಹಿನ್ನೆಲೆಯಲ್ಲಿ ಜೈಲಿನಿಂದ ಶುಕ್ರವಾರವೇ ಹೊರಬಂದಿರುವ ವರ್ತೂರ್ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ದೊಡ್ಮನೆ ಪ್ರವೇಶದ ಹಿನ್ನೆಲೆಯಲ್ಲೇ ನಿನ್ನೆ ಅವರನ್ನು ಮಾಧ್ಯಮಗಳ ಮುಂದೆ ಹೋಗದಂತೆ ತಡೆಯಲಾಯಿತು. ಕನಿಷ್ಠ ಅವರ ಕುಟುಂಬದ ಜೊತೆಯೂ ಮಾತನಾಡಲಿಕ್ಕೆ ಅವಕಾಶ ಕಲ್ಪಿಸಿಲ್ಲ. ಬಿಗ್ ಬಾಸ್ ನಿಯಮದ ಪ್ರಕಾರ, ಒಂದು ಸಲ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದ ನಂತರ ಮತ್ತೆ ಅವರು ಕುಟುಂಬದೊಂದಿಗೆ ಸಂಪರ್ಕ ಮಾಡುವುದಾಗಲಿ ಮತ್ತು ಕುಟುಂಬದ ಸದಸ್ಯರ ಜೊತೆ ಬೆರೆಯುವುದಾಗಲಿ ಮಾಡುವಂತಿಲ್ಲ. ಆ ನಿಯಮವನ್ನು ವರ್ತೂರ್ ಕೂಡ ಮಾಡಿದ್ದಾರೆ. ಹಾಗಾಗಿ ಜೈಲಿನಿಂದ ಸೀದಾ ಅವರು ಬಿಗ್ ಬಾಸ್ ಮನೆಗೆ ಹೋಗಿದ್ದಾರೆ. ನಿನ್ನೆ ರಾತ್ರಿಯೇ ಬೆಂಗಳೂರಿನ ದೊಡ್ಡ ಆಲದ ಮರ ಬಳಿ ನಿರ್ಮಿಸಲಾದ ಬಿಗ್ ಬಾಸ್ ಮನೆಗೆ ಸಂತೋಷ್ ಅವರನ್ನು ಕರೆದುಕೊಂಡು ಹೋಗಲಾಗಿದೆ. ನಂತರ ಅವರಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯದ ತಪಾಸಣೆ ನಂತರವೇ ಅವರನ್ನು ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ಬಿಗ್ ಬಾಸ್ ಮನೆಗೆ ವರ್ತೂರ್ ಸಂತೋಷ್ ಮತ್ತೆ ಬರುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಸಂತೋಷ್ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದು, ಈ ಮೂಲಕ ವೀಕೆಂಡ್ ಎಪಿಸೋಡ್​ಗೆ ಅವರು ಲಭ್ಯವಾಗಲಿದ್ದಾರೆ. ಹೌದು ಶುಕ್ರವಾರ ಜಮೀನು ಸಿಕ್ಕಿದ್ದು, ಕೋರ್ಟ್‌ ಬಳಿ ಬಿಗ್‌ ಬಾಸ್‌ ಕಾರ್ಯಕ್ರಮಕ್ಕೆ ಸಂಬಂಧಿಸಿದ ಕಾರ್‌ ಒಂದು ಕಂಡು ಬಂದಿದೆ ಅದರಲ್ಲಿಯೇ ಅವರನ್ನ ಕರೆದುಕೊಂಡು ಹೋಗಲಾಗಿದೆ. ಹೀಗಾಗಿ ಶನಿವಾರ ಬಿಗ್‌ ಬಾಸ್‌ ಮನೆಗೆ ವರ್ತೂರ್‌ ಸಂತೋಷ್‌ ರೀ ಎಂಟ್ರಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಜಾಮೀನು ನೀಡಿರುವ ಕೋರ್ಟ್‌ ಯಾವುದೇ ರೀತಿಯ ಹೆಚ್ಚಿನ ಷರತ್ತನ್ನು ಹಾಕಿಲ್ಲ. ಹೀಗಾಗಿ ಬಿಗ್‌ ಬಾಸ್‌ ಮನೆಗೆ ಮತ್ತೆ ಮರಳಲು ಅವಕಾಶವಿದೆ ಎನ್ನಲಾಗಿದೆ. ಈ ಕಾರಣದಿಂದಲೇ ಸಂತೋಷ್ ಅವರು ಬಿಗ್ ಬಾಸ್​ಗೆ ರೀ ಎಂಟ್ರಿ ಪಡೆಡಿದ್ದಾರೆ.

ನಿನ್ನೆಯೇ ಬಿಗ್ ಬಾಸ್ ತಂಡವನ್ನು ಸೇರಿರುವ ಸಂತೋಷ್, ಇಂದು ಬಿಗ್ ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ. ಅದು ಹೇಗೆ ಎನ್ನುವ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗಿದೆ. ಬಿಗ್ ಬಾಸ್ ಮನೆಗೆ ಹೋಗುವ ಕುರಿತು ಸಂತೋಷ್ ತಾಯಿಯೂ ಖಚಿತ ಪಡಿಸಿದ್ದಾರೆ. ಕೆಲವು ಮೂಲಗಳ ಪ್ರಕಾರ ವೈಲ್ಡ್ ಕಾರ್ಡ್ ಮೂಲಕ ಸಂತೋಷ್​ ಅವರಿಗೆ ಎಂಟ್ರಿ ಕೊಡುವ ಸಾಧ್ಯತೆ ಇದೆಯಂತೆ. ಈಗ ಸಂತೋಷ್ ಅವರು ದೊಡ್ಮನೆಗೆ ಎಂಟ್ರಿ ಕೊಟ್ಟರೆ ಲೆಕ್ಕಾಚಾರ ಬದಲಾಗಲಿದೆ. ಹೀಗಾಗಿ ಸಂತೋಷ್ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದಾರೆ ಅಂತ ಹೇಳಲಾಗ್ತಿದ್ದು, ಅವರ ಎಂಟ್ರಿ ಹೇಗಿರಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಸಿಗಲಿದೆ 10ಸಾವಿರ ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸೋದು ಹೇಗೆ? ಎಲ್ಲಿ?ಸಂಪೂರ್ಣ ಮಾಹಿತಿ ಇಲ್ಲಿದೆ

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram